23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರುಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಸ್ವಲ್ಪಕಾಂಕ್ರೀಟ್ ಹಾಕಿದ್ದಾರೆ. ಉಳಿದ ಭಾಗದಲ್ಲಿ ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸುವುದಿಲ್ಲ

ಇದರಿಂದ ಆಕ್ರೋಶಗೊಂಡ ಈ ಭಾಗದ ಜನರು ರಸ್ತೆಯಲ್ಲಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳದೆ ಹೋದರೆ ಈ ಭಾಗದ ಜನರೇ ಹಣ ಸಂಗ್ರಹಿಸಿ ಗುತ್ತಿಗೆದಾರ ಹಾಕಿದ ಜಲ್ಲಿಯನ್ನು ತೆಗೆಯುವುದರ ಜೊತೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

Related posts

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya
error: Content is protected !!