September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2023 -2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಮ್.ಬಿ.ಕೆ ಸೇವಿತ ಒಕ್ಕೂಟದ ವಾರ್ಷಿಕ ವರದಿ ಹಾಗೂ ಒಕ್ಕೂಟದ ಆಯವ್ಯಯ ಮಂಡಿಸಿ ಅನುಮೋದನೆಯನ್ನು ಪಡೆದರು. ವಲಯ ಮೇಲ್ವಿಚಾರಕರಾದ ಜಯಾನಂದರವರು ಪ್ರಾಸ್ತವಿಕವಾಗಿ ಮಾತನಾಡಿ ವಾರ್ಷಿಕ ಮಹಾಸಭೆಯ ಉದ್ದೇಶ ಮತ್ತು ಜವಾಬ್ದಾರಿಯ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು. ಗೋಪಿಕಾ ಸಂಜೀವಿನಿ ಸದಸ್ಯರು ಮಾಡಿದ ರಾಗಿಹುಡಿ ಯನ್ನು ಬಿಡುಗಡೆ ಮಾಡಲಾಯಿತು. ರಾಜ್ಯ ಪ್ರಶಸ್ತಿ ಪಡೆದ ಜಯಾನಂದರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಭೆಯಲ್ಲಿ ರಕ್ಷಿತ್ ಜೈನ್ ಸಾಮಾಜಿಕ ಲೆಕ್ಕ ಪರಿಶೋದನೆಯ ಜಿಲ್ಲಾ ಸಂಯೋಜಕರು ಎನ್ ಆರ್.ಎಲ್.ಎಂ ಬಗ್ಗೆ ಮಾತನಾಡಿದರು. ಸಂಘದ ಸದಸ್ಯರು “ನಮ್ಮ ಕಸ ” ನಮ್ಮ ಜವಾಬ್ದಾರಿ ” ಎಂಬ ವಿಷಯ ಬಗ್ಗೆ ಕಿರು ಪ್ರಹಸನ ದ ಮೂಲಕ ಸಂದೇಶ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಗೌಡ, ಶಕ್ತಿ ಸಂಜೀವಿನಿ ಸಂಘದ ಸದಸ್ಯೆ ಎವುಲಿನ ಡಿಸಿಲ್ವ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಲಕ್ಕಿ ಗೇಮ್ ನಲ್ಲಿ ಬಹುಮಾನವನ್ನು ಸಂಘದ ಸದಸ್ಯರಾದ ಯಮುನಾ, ಪ್ರಿಯದರ್ಶಿನಿ, ಬಾಲಕ ಇವರು ಪಡೆದುಕೊಂಡರು.

ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಅಧ್ಯಕ್ಷಿಯ ಭಾಷಣ ಮಾಡಿದರು. ಕೃಷಿ ಸಖಿ ಹರಿಣಾಕ್ಷಿ ನಿರೂಪಣೆ ಮಾಡಿ ಎಲ್.ಸಿಆರ್.ಪಿ ಜಯಂತಿ ಸ್ವಾಗತಿಸಿದರು. ಎಮ್ ಬಿಕೆ ಸೇವಿತ ಧನ್ಯವಾದವಿತ್ತರು

Related posts

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya
error: Content is protected !!