23.3 C
ಪುತ್ತೂರು, ಬೆಳ್ತಂಗಡಿ
February 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

ಬೆಳ್ತಂಗಡಿಯ ನೆರಿಯ ಗ್ರಾಮದ ಕಾಟಾಜೆ ಸುಂದರ ಮಲೆಕುಡಿಯ ಅವರ ಕೈಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕೊಟ್ಟಿರುವ ತೀರ್ಪು ಅತ್ಯಂತ ಐತಿಹಾಸಿಕ ಮತ್ತು ಸ್ವಾಗತಾರ್ಹವಾದುದು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಬೆಳ್ತಂಗಡಿ ತಾಲೂಕು ಘಟಕ ಹರ್ಷ ವ್ಯಕ್ತಪಡಿಸಿದೆ.

ಇಡೀ ಈ ಪ್ರಕರಣವನ್ನು ನ್ಯಾಯಾಲಯದ ಕಟಕಟೆಗೆ ತಲುಪಿಸಿ ದಾಳಿಗೊಳಗಾದ ಕುಟುಂಬವನ್ನು ರಕ್ಷಿಸಲು ನಡೆಸಿದ ಪ್ರಯತ್ನಗಳು , ಹೋರಾಟಗಳು ಅತ್ಯಂತ ರೋಮಾಂಚನಕಾರಿ. ಈ ಪ್ರಕರಣವನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಡಿವೈಎಫ್ಐ , ಸಿಪಿಐ(ಎಂ) ಸೇರಿದಂತೆ ಮಲೆಕುಡಿಯರ ಸಮುದಾಯದ ಸಂಘಟನೆಗಳು ಮತ್ತು ಇತರೆ ಎಲ್ಲಾ ಸಮಾನ ಮನಸ್ಕ ಸಂಘಟನೆಗಳು ನಿರಂತರ ಹೋರಾಟವನ್ನು ನಡೆಸಿದವು.

ಆಸ್ಪತ್ರೆಗೆ ಸಿಪಿಐ(ಎಂ) ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿ.ಕಾ.ಸೀತರಾಮ್ ಯೆಚೂರಿ, ಮುಂದುವರಿದ ಹೋರಾಟದಲ್ಲಿ ತ್ರಿಪುರ ಸಂಸತ್ ಸದಸ್ಯರಾಗಿದ್ದ ಕಾಂ.ಜಿತೇಂದ್ರ ಚೌಧುರಿ ಭಾಗವಹಿಸಿದ್ದರು. ಕಿಸಾನ್ ಸಭಾದ ವಿಜೂಕೃಷ್ಣನ್ ಭೇಟಿ ನೀಡಿದ್ದರು.

ಈ ಪ್ರಕರಣದಲ್ಲಿ ಧೃಡವಾಗಿ ನಿಂತು ಅತ್ಯಂತ ಧೈರ್ಯದಿಂದ ಎಲ್ಲಾ ಒತ್ತಡ, ಸಮಸ್ಯೆಗಳನ್ನು ಎದುರಿಸಿ ನಿಂತ ಸುಂದರ ಮಲೆಕುಡಿಯ ಮತ್ತು ಅವರ ಕುಟುಂಬದವರನ್ನು ವಿಜಯವಾಡದಲ್ಲಿ ಜರುಗಿದ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ನ ಅಖಿಲ ಭಾರತ ಸಮ್ಮೇಳನದಲ್ಲಿ ಕೇರಳದ ಮುಖ್ಯಮಂತ್ರಿ ಕಾಂ. ಪಿಣರಾಯಿ ವಿಜಯನ್ ರವರು ಅಭಿನಂದಿಸಿದ್ದರು.

ಈ ಪ್ರಕರಣ ತಾರ್ಕಿಕ ಹಂತಕ್ಕೆ ತಲುಪಲು ಶ್ರಮಿಸಿದ ಅಂದಿನ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ , ಬಂಟ್ವಾಳ ಎಎಸ್ಪಿಯಾಗಿದ್ದ ರಾಹುಲ್ ಕುಮಾರ್ ಸೇರಿದಂತೆ ಸುಂದರ ಮಲೆಕುಡಿಯರ ಪರವಾಗಿ ವಾದಿಸಿದ ಸರ್ಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೆಟ್ ಕ್ರಾಸ್ತ . ಇಡೀ ಘಟನೆಗೆ ಕಾರಣವಾಗಿದ್ದ ಜಮೀನು ವಿವಾದ ಇನ್ನೂ ಜೀವಂತವಾಗಿರುವುದು ನಮ್ಮ ವ್ಯವಸ್ಥೆಯ ದುರಂತ. ನೆರಿಯ ಗ್ರಾಮದ ಕಾಟಾಜೆ , ಪರ್ಪಳ ಪ್ರದೇಶದ ಮಲೆಕುಡಿಯ ಸಮುದಾಯದ ಮನೆ , ಕೃಷಿ ಚಟುವಟಿಕೆಗಳನ್ನು ಮಾಡಿಕೊಂಡಿರುವ ಜಮೀನಿಗೆ ಸೂಕ್ತ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತವಾಗಬೇಕು , ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ನಡೆಸಬೇಕಾದೀತೆಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ವಸಂತ ನಡ , ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಸಂಚಾಲಕ ಶೇಖರ್ ಲಾಯಿಲ ಎಚ್ಚರಿಕೆ ನೀಡಿದ್ದಾರೆ.

Related posts

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya
error: Content is protected !!