22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.

ಫಾತಿಮತ್ ರಂಝೀನ್ ರವರ ದೂರಿನಂತೆ, ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಗೋದ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಈ ಬಗ್ಗೆ ಫಾತಿಮತ್ ರಂಝೀನ್ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಅವರ ಬಾಬ್ತು ಸುಮಾರು ರೂ. 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya
error: Content is protected !!