25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.

ಫಾತಿಮತ್ ರಂಝೀನ್ ರವರ ದೂರಿನಂತೆ, ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಗೋದ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಈ ಬಗ್ಗೆ ಫಾತಿಮತ್ ರಂಝೀನ್ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಅವರ ಬಾಬ್ತು ಸುಮಾರು ರೂ. 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya
error: Content is protected !!