23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುಧೀರ್ಘ ಸೇವೆಯ ನಂತರ ಸರ್ಕಾರಿ ಸೇವೆಗೆ ವಯೋ ನಿವೃತ್ತಿ ಹೊಂದಿದ ಅಬ್ದುಲ್ ರಝಾಕ್ ಅವರಿಗೆ ವಿದಾಯ ಕೂಟ ಕಾರ್ಯಕ್ರಮ ಫೆ. 19 ರಂದು ತಾಲೂಕು ಆರೋಗ್ಯಾಧಿಕಾರಿ ಕಛೇರಿಯಲ್ಲಿ ಎಲ್ಲಾ ಗಣ್ಯ ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ, ಸುಳ್ಯ ತಾಲೂಕು ಆರೋಗ್ಯಾಧಿಕಾರಿ, ಹಾಗೂ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿ ಶುಭ ಕೋರಿದರು. ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗಳು ಎಲ್ಲಾ ವೈದ್ಯಾಧಿಕಾರಿಗಳು ಭಾಗವಹಿಸಿ, ವೃತ್ತಿಯಲ್ಲಿ ಸೌಮ್ಯ ಸ್ವಭಾವ, ನಿಷ್ಠೆ, ಸಮಯಪ್ರಜ್ಞೆ, ಅಪಘಾತ ರಹಿತ ಉತ್ತಮ ಚಾಲನೆಯ ಸೇವೆಯನ್ನು ಪ್ರಶಾಂಸಿಸಿ ಶಾಲು, ಫಲಪುಷ್ಪ ನೀಡಿ ಗೌರವಿಸಲಾಯಿತು.

Related posts

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya
error: Content is protected !!