25.8 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

ಅಂಡಿಂಜೆ ಗ್ರಾಮದ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆಯನ್ನು ವೇಣೂರು ಪ್ರಕಾಶ್ ಪುರೋಹಿತರ ಆಚಾರ್ಯತ್ವದಲ್ಲಿ ಜರಗಿಸಲಾಯಿತು.

ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಗಳಾಗಿ ಕಾರ್ಕಳ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ, ಅಮರ ಶಿಲ್ಪಿ ಜಕಣಾಚಾರ್ಯ ಪ್ರಶಸ್ತಿ ಪುರಸ್ಕೃತ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು, ಮೂಡಬಿದ್ರಿ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಾಂತಲಾ ಸೀತಾರಾಮ ಆಚಾರ್ಯ, ಮೂಡಬಿದ್ರಿಯ ಉದ್ಯಮಿ ಗಣೇಶ ಆಚಾರ್ಯ ಹೊಸ್ಮಾರ್, ಕೂಡುವಳಿಕೆ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಕಜೆ, ಹಾಗೂ ಪುರೋಹಿತ್ ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗವನ್ನು ತೊಡಗಿಸಿಕೊಂಡಿದ್ದು ,ಪ್ರಸ್ತುತ ಅರ್ವ ಎಂಟರ್ಪ್ರೈಸಸ್ ಎಂಬ ಸಂಸ್ಥೆಯಲ್ಲಿ ಬೀಡಿ, ಗೇರುಬೀಜ ಸಮೇತ ವಿವಿಧ ಕಂಪೆನಿಗಳಿಗೆ ಭವಿಷ್ಯನಿಧಿ(ಪಿ ಎಫ್) ಮಾರ್ಗದರ್ಶಕರಾಗಿ ಯಶಸ್ವಿಯಾಗಿದ್ದು, ಅದಕ್ಕಾಗಿ ವಿವಿಧ ಕಂಪೆನಿಗಳಿಂದ ಪುರಸ್ಕೃತ ಸುಬ್ರಹ್ಮಣ್ಯ ಆಚಾರ್ಯ ಪಾಲಬೆ ಅರುವ ,ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಆದರ್ಶ್ ಅಂಡಿಂಜೆ, 2024 ರ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪ ಪೂ ಕಾಲೇಜಿನಲ್ಲಿ ಅತ್ಯಧಿಕ ಅಂಕ ಗಳಿಸಿರುವ ಕು.ಸಾನಿಧ್ಯ ಬಿ ಕೆ ಆಚಾರ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.

ಡಿ ಭಾಸ್ಕರ ಆಚಾರ್ಯರು ಪ್ರಾರ್ಥನೆಯೊಂದಿಗೆ ಸ್ವಾಗತಿಸಿದ ಕಾರ್ಯಕ್ರಮವನ್ನು ಕು ಸಾನಿಧ್ಯ ಬಿ ಕೆ ನಿರೂಪಿಸಿದರು.

Related posts

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya
error: Content is protected !!