23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

ಅಂಡಿಂಜೆ ಗ್ರಾಮದ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆಯನ್ನು ವೇಣೂರು ಪ್ರಕಾಶ್ ಪುರೋಹಿತರ ಆಚಾರ್ಯತ್ವದಲ್ಲಿ ಜರಗಿಸಲಾಯಿತು.

ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಗಳಾಗಿ ಕಾರ್ಕಳ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ, ಅಮರ ಶಿಲ್ಪಿ ಜಕಣಾಚಾರ್ಯ ಪ್ರಶಸ್ತಿ ಪುರಸ್ಕೃತ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು, ಮೂಡಬಿದ್ರಿ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಾಂತಲಾ ಸೀತಾರಾಮ ಆಚಾರ್ಯ, ಮೂಡಬಿದ್ರಿಯ ಉದ್ಯಮಿ ಗಣೇಶ ಆಚಾರ್ಯ ಹೊಸ್ಮಾರ್, ಕೂಡುವಳಿಕೆ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಕಜೆ, ಹಾಗೂ ಪುರೋಹಿತ್ ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗವನ್ನು ತೊಡಗಿಸಿಕೊಂಡಿದ್ದು ,ಪ್ರಸ್ತುತ ಅರ್ವ ಎಂಟರ್ಪ್ರೈಸಸ್ ಎಂಬ ಸಂಸ್ಥೆಯಲ್ಲಿ ಬೀಡಿ, ಗೇರುಬೀಜ ಸಮೇತ ವಿವಿಧ ಕಂಪೆನಿಗಳಿಗೆ ಭವಿಷ್ಯನಿಧಿ(ಪಿ ಎಫ್) ಮಾರ್ಗದರ್ಶಕರಾಗಿ ಯಶಸ್ವಿಯಾಗಿದ್ದು, ಅದಕ್ಕಾಗಿ ವಿವಿಧ ಕಂಪೆನಿಗಳಿಂದ ಪುರಸ್ಕೃತ ಸುಬ್ರಹ್ಮಣ್ಯ ಆಚಾರ್ಯ ಪಾಲಬೆ ಅರುವ ,ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಆದರ್ಶ್ ಅಂಡಿಂಜೆ, 2024 ರ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪ ಪೂ ಕಾಲೇಜಿನಲ್ಲಿ ಅತ್ಯಧಿಕ ಅಂಕ ಗಳಿಸಿರುವ ಕು.ಸಾನಿಧ್ಯ ಬಿ ಕೆ ಆಚಾರ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.

ಡಿ ಭಾಸ್ಕರ ಆಚಾರ್ಯರು ಪ್ರಾರ್ಥನೆಯೊಂದಿಗೆ ಸ್ವಾಗತಿಸಿದ ಕಾರ್ಯಕ್ರಮವನ್ನು ಕು ಸಾನಿಧ್ಯ ಬಿ ಕೆ ನಿರೂಪಿಸಿದರು.

Related posts

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya
error: Content is protected !!