23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವಿಮಲಾ ರವರ ಅಧ್ಯಕ್ಷತೆಯಲ್ಲಿ ಫೆ.20ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಶುಸಂಗೋಪನೆ ಇಲಾಖೆಯ ಡಾ. ವಿಶ್ವನಾಥ ಸಿ. ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಪಂಚಾಯತ್‌ ಸದಸ್ಯರುಗಳಾದ ರಾಧಾಕೃಷ್ಣ ಗೌಡ, ಶ್ರೀಮತಿ ಲೀಲಾ, ಶ್ರೀಮತಿ ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ. ಶ್ರೀಧರ, ಕೃಷ್ಣಮೂರ್ತಿ, ಶ್ರೀಮತಿ ಶೋಭಾವತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಕಾರ್ಯದರ್ಶಿ ಸರೋಜಿನಿ ವಾರ್ಡ್ ಸಭೆಯ ಬೇಡಿಕೆಯನ್ನು ವಾಚಿಸಿದರು. ಸಿಬ್ಬಂದಿ ರಮೇಶ್ ವಂದಿಸಿದರು.

Related posts

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya
error: Content is protected !!