29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವಿಮಲಾ ರವರ ಅಧ್ಯಕ್ಷತೆಯಲ್ಲಿ ಫೆ.20ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಶುಸಂಗೋಪನೆ ಇಲಾಖೆಯ ಡಾ. ವಿಶ್ವನಾಥ ಸಿ. ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಪಂಚಾಯತ್‌ ಸದಸ್ಯರುಗಳಾದ ರಾಧಾಕೃಷ್ಣ ಗೌಡ, ಶ್ರೀಮತಿ ಲೀಲಾ, ಶ್ರೀಮತಿ ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ. ಶ್ರೀಧರ, ಕೃಷ್ಣಮೂರ್ತಿ, ಶ್ರೀಮತಿ ಶೋಭಾವತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಕಾರ್ಯದರ್ಶಿ ಸರೋಜಿನಿ ವಾರ್ಡ್ ಸಭೆಯ ಬೇಡಿಕೆಯನ್ನು ವಾಚಿಸಿದರು. ಸಿಬ್ಬಂದಿ ರಮೇಶ್ ವಂದಿಸಿದರು.

Related posts

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya
error: Content is protected !!