April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರುಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಸ್ವಲ್ಪಕಾಂಕ್ರೀಟ್ ಹಾಕಿದ್ದಾರೆ. ಉಳಿದ ಭಾಗದಲ್ಲಿ ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸುವುದಿಲ್ಲ

ಇದರಿಂದ ಆಕ್ರೋಶಗೊಂಡ ಈ ಭಾಗದ ಜನರು ರಸ್ತೆಯಲ್ಲಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳದೆ ಹೋದರೆ ಈ ಭಾಗದ ಜನರೇ ಹಣ ಸಂಗ್ರಹಿಸಿ ಗುತ್ತಿಗೆದಾರ ಹಾಕಿದ ಜಲ್ಲಿಯನ್ನು ತೆಗೆಯುವುದರ ಜೊತೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

Related posts

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!