22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರುಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಸ್ವಲ್ಪಕಾಂಕ್ರೀಟ್ ಹಾಕಿದ್ದಾರೆ. ಉಳಿದ ಭಾಗದಲ್ಲಿ ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸುವುದಿಲ್ಲ

ಇದರಿಂದ ಆಕ್ರೋಶಗೊಂಡ ಈ ಭಾಗದ ಜನರು ರಸ್ತೆಯಲ್ಲಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳದೆ ಹೋದರೆ ಈ ಭಾಗದ ಜನರೇ ಹಣ ಸಂಗ್ರಹಿಸಿ ಗುತ್ತಿಗೆದಾರ ಹಾಕಿದ ಜಲ್ಲಿಯನ್ನು ತೆಗೆಯುವುದರ ಜೊತೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

Related posts

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
error: Content is protected !!