21 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.

ಫಾತಿಮತ್ ರಂಝೀನ್ ರವರ ದೂರಿನಂತೆ, ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಗೋದ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಈ ಬಗ್ಗೆ ಫಾತಿಮತ್ ರಂಝೀನ್ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಅವರ ಬಾಬ್ತು ಸುಮಾರು ರೂ. 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!