24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.

ಫಾತಿಮತ್ ರಂಝೀನ್ ರವರ ದೂರಿನಂತೆ, ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಗೋದ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಈ ಬಗ್ಗೆ ಫಾತಿಮತ್ ರಂಝೀನ್ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಅವರ ಬಾಬ್ತು ಸುಮಾರು ರೂ. 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಜನಜಾತಿಯ ಗರೀಮಾ ಉತ್ಸವ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!