September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.

ಫಾತಿಮತ್ ರಂಝೀನ್ ರವರ ದೂರಿನಂತೆ, ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಗೋದ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಈ ಬಗ್ಗೆ ಫಾತಿಮತ್ ರಂಝೀನ್ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಅವರ ಬಾಬ್ತು ಸುಮಾರು ರೂ. 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!