ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya
error: Content is protected !!