September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

ಬೆಳ್ತಂಗಡಿ: ಪುತ್ತೂರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿ, ಬೆಳ್ತಂಗಡಿ ಕೆನರಾ ಬ್ಯಾಂಕ್ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಇದರ ಆಶ್ರಯದಲ್ಲಿ ಸಂಜೀವಿನಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ ಮತ್ತು ಕೃಷಿ ಸಖಿ, ಪಶು ಸಖಿ, ಸ್ವಚ್ಚತಾ ಸಿಬ್ಬಂದಿ ಹಾಗೂ ಸಂಜೀವಿನಿ ಸದಸ್ಯರಿಗೆ ವಿಮಾ ನೋಂದಣಿ ಕಾರ್ಯಕ್ರಮ, ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಫೆ.20 ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿ ವಿಭಾಗೀಯ ಅಧಿಕಾರಿ ಜಯಪ್ರತಾಪ್ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್, ತಾ.ಪಂ.ಇಓ ಭವಾನಿ ಶಂಕರ್ ಎನ್., ಪುತ್ತೂರು ಕೆನರಾ ಬ್ಯಾಂಕ್ ಪ್ರಬಂಧಕ ಅರುಣ್ ನಾಯಕ್, ಜಿಲ್ಲಾ ಪಂಚಾಯತ್ ನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ಉಜಿರೆ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ, ಬೆಳ್ತಂಗಡಿ ಕೆನರಾ ಬ್ಯಾಂಕ್ ಪ್ರಬಂಧಕ ಪ್ರತಾಪ್ ನಾಯಕ್, ಕೆನರಾ ಬ್ಯಾಂಕ್ ಆರ್ಥಿಕ ಸೇರ್ಪಡಾ ವಿಭಾಗದ ಅರ್ನಾಬ್ ರಾಯ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್ ಹಾಗೂ ಸಂಜೀವಿನಿ ತಾಲೂಕು ವ್ಯವಸ್ಥಾಪಕ ನಿತೀಶ್, ಉಪಸ್ಥಿತರಿದ್ದರು.

ಬೆಳ್ತಂಗಡಿ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ನಾಯಕ್, ತಾಲೂಕು ಸಂಜೀವಿನಿ ಸಿಬ್ಬಂದಿಗಳಾದ ಜಯಾನಂದ ಲಾಯಿಲ, ಭರತ್, ವೀಣಾಶ್ರೀ, ವಿನೋದ್ ಪ್ರಸಾದ್ ಕಲ್ಲಾಜೆ , ಶ್ರೀಕಲಾ ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿ ಹಾಗೂ ಸ್ವಚ್ಚತಾ ಸಿಬ್ಬಂದಿಗಳು ಭಾಗವಹಿಸಿದ್ದರು. ಇಂದಬೆಟ್ಟು ಪಶು ಸಖಿ ಕವಿತಾ ಪ್ರಾರ್ಥಿಸಿದರು. ಸ್ವಸ್ತಿಕ್ ಜೈನ್ ನಿರೂಪಿಸಿದರು.

Related posts

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

Suddi Udaya
error: Content is protected !!