September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

ಉಜಿರೆ : ಬೆಂಗಳೂರಿನ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಫೆ.21 ರಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಉಚಿತ ಡಯಾಲಿಸಿಸ್ ಸೆಂಟರ್‌ಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ವ್ಯವಸ್ಥೆ ಹೊಂದಿರುವ ಹೈಟೆಕ್ ಆಸ್ಪತ್ರೆಯನ್ನು ತೆರೆದು ವೈದ್ಯಕೀಯ ಸೇವೆ ನೀಡುತ್ತಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧನ್ಯವಾದ ತಿಳಿಸಿದ ಅವರು ಇಲ್ಲಿರುವ ಸುಸಜ್ಜಿತ ವ್ಯವಸ್ಥೆ ಮತ್ತು ವೈದ್ಯಕೀಯ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ನರ್ಸಿಂಗ್ ಅಧೀಕ್ಷಕಿ ಶ್ರೀಮತಿ ಶೆರ್ಲಿ, ಪಿ.ಸಿ.ಸಿ ಶ್ರೀಮತಿ ಹೇಮಾವತಿ ಐ, ಸಂಪರ್ಕಾಧಿಕಾರಿ ಚಿದಾನಂದ ಡಿ. ಆರ್, ಸೂಪರ್‌ವೈಸರ್ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿ: ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya
error: Content is protected !!