30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya
error: Content is protected !!