26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!