July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಕುತ್ಲೂರು : ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ) ಕುತ್ಲೂರು ಇದರ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ ಪುರುಷರ ವಿಭಾಗದ ಪ್ರೋ ಮಾದರಿಯ ಗ್ರಾಮ ಸೀಮಿತ ಮುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಶಿವಶಕ್ತಿ ಟ್ರೋಫಿ 2025 ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಫೆ. 23 ರಂದು ಬೆಳಗ್ಗೆ ಗಂಟೆ 9-00ಕ್ಕೆ ಕುತ್ಲೂರು ಬಂತ್ರುಗುಡ್ಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಮಾರಂಭದ ಉದ್ಘಾಟನೆಯನ್ನು ಕೊಕ್ರಾಡಿ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅರ್ಚಕರು ರಮೇಶ್ ಭಟ್ , ಮೆಡಿಕಲ್ ಕ್ಯಾಂಪ್‌ ಉದ್ಘಾಟನೆಯನ್ನು ಡಾ। ಪ್ರಸಾದ್ ಬಿ. ಶೆಟ್ಟಿ ವಿಜಯ ಪಾಲಿಕ್ಲಿನಿಕ್ ಹೊಸ್ಮಾರು, ಕ್ರೀಡಾಂಗಣ ಉದ್ಘಾಟನೆಯನ್ನು ಪ್ರವೀಣ್ ಶಿಲ್ಪಲೋಕ ಕುತ್ಲೂರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾಕರ ಬುಣ್ಣು ಕಾಡಬೆಟ್ಟು ಕುತ್ಲೂರು ವಹಿಸಲಿದ್ದಾರೆ.

ಶಿಬಿರದ ವಿಶೇಷತೆಗಳು : ವೈದ್ಯಕೀಯ ವಿಭಾಗ , ಚರ್ಮದ ವಿಭಾಗ, ಸ್ತ್ರೀರೋಗ ವಿಭಾಗ, ಮಕ್ಕಳ ವಿಭಾಗ, ಕಿವಿ ಮೂಗು ಗಂಟಲು ವಿಭಾಗ, ದಂತ ಚಿಕಿತ್ಸಾ ವಿಭಾಗ, ಹೃದಯ ವಿಭಾಗ ,ಕಣ್ಣಿನ ವಿಭಾಗ , ಶಸ್ತ್ರಚಿಕಿತ್ಸಾ ವಿಭಾಗ , ಎಲುಬು ಮತ್ತು ಕೀಲು ವಿಭಾಗ , ಬಿ.ಪಿ. ಶುಗರ್ ಮತ್ತು ರಕ್ತದ ಗುಂಪು ತಪಾಸಣೆ ನಡೆಯಲಿದೆ.

ಅದೇ ದಿನ ರಾತ್ರಿ ಗಂಟೆ 9.30ಕ್ಕೆ ಕಾಪು ರಂಗತರಂಗ ಕಲಾವಿದರ ಈ ವರ್ಷದ ನೂತನ ಕುಟ್ಯಾಣ್ಣನ ಕುಟುಂಬ ತುಳು ಸಾಂಸಾರಿಕ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!