25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!