April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!