26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya
error: Content is protected !!