July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya
error: Content is protected !!