July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

ನೆರಿಯ ಗ್ರಾಮದ ಸುಂದರ ಮಲೆಕುಡಿಯರ ಕೈಗೆ ಕಳೆ ಕೊಚ್ಚುವ ಯಂತ್ರದಿಂದ ಅಮಾನುಷವಾಗಿ ಕಡಿದು ಬೆರಳನ್ನು ತುಂಡರಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ದಶಕದ ಬಳಿಕ ಸಮಾಧಾನಕರ ತೀರ್ಪನ್ನು ನೀಡಿದೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷರುಗಳಾದ ಸಂಜೀವ ಕುಲ್ಲಾಜೆ, ಎಲ್ಯಣ್ಣ ಮಲೆಕುಡಿಯ ಅಂದಿನ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಲಂಗಾರು , ವಸಂತಿ ಕುತ್ಲೂರು, ಉಡುಪಿ ಜಿಲ್ಲಾ ಅಧ್ಯಕ್ಷ ಶ್ರೀಧರ್ ಗೌಡ ಈದು ಮೊದಲಾದವರ ನೇತೃತ್ವದಲ್ಲಿ ಕೇಮಾರು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೃಹತ್ ಹೋರಾಟವನ್ನು ಮಾಡಲಾಗಿತ್ತು.

ಹೋರಾಟದಲ್ಲಿ ಭಾಗಿಯಾದ ಎಲ್ಲಾ ಸಮುದಾಯ ಬಾಂಧವರಿಗೆ , ತನಿಖಾಧಿಕಾರಿಗಳು ಮತ್ತು ಅಭಿಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ. ದೌರ್ಜನ್ಯಕ್ಕೊಳಗಾದ ಸುಂದರ ಮಲೆಕುಡಿಯರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ನೀಡುವಂತೆ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya
error: Content is protected !!