23 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

ಬೆಳ್ತಂಗಡಿ: 2015ರಲ್ಲಿ ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಹಾಗೂ ಕುಟುಂಬದ ಮೇಲೆ ಹಲ್ಲೆ ಮತ್ತು ಕೈ ಬೆರಳು ಕತ್ತರಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆ ಆದೇಶ ಪ್ರಕಟವಾಗಿರುವುದು ಸುಂದರ ಮಲೆಕುಡಿಯ ಅವರ ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದ ಗಂಭೀರತೆಯನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯು 2015ರಲ್ಲಿ ಉಜಿರೆಯಿಂದ ಬೆಳ್ತಂಗಡಿವರೆಗೆ ಬೃಹತ್ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ನಡೆಸಿತ್ತು.


ಎಸ್‌ಡಿಪಿಐ ನಾಯಕರು ಸುಂದರ ಮಲೆಕುಡಿಯ ಅವರನ್ನು ಭೇಟಿಯಾಗಿ ದೈರ್ಯ ತುಂಬಿದ್ದರು. ನ್ಯಾಯಕ್ಕಾಗಿ ಹೋರಾಟದ ನೇತೃತ್ವ ವಹಿಸಿದ್ದರು. ಹೋರಾಟದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ನ್ಯಾಯಾಲಯ ಆರೋಪಿಗಳ ವಿರುದ್ದ ಆರೋಪಗಳು ಸಾಬೀತಾಗಿರುವ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶ ನೀಡಿರುವುದು ತಡವಾದರು ಸಂತ್ರಸ್ತರಿಗೆ ಹಾಗೂ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಅಕ್ಬರ್ ಬೆಳ್ತಂಗಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya
error: Content is protected !!