23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

ಬೆಳ್ತಂಗಡಿ: 2015ರಲ್ಲಿ ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಹಾಗೂ ಕುಟುಂಬದ ಮೇಲೆ ಹಲ್ಲೆ ಮತ್ತು ಕೈ ಬೆರಳು ಕತ್ತರಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆ ಆದೇಶ ಪ್ರಕಟವಾಗಿರುವುದು ಸುಂದರ ಮಲೆಕುಡಿಯ ಅವರ ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದ ಗಂಭೀರತೆಯನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯು 2015ರಲ್ಲಿ ಉಜಿರೆಯಿಂದ ಬೆಳ್ತಂಗಡಿವರೆಗೆ ಬೃಹತ್ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ನಡೆಸಿತ್ತು.


ಎಸ್‌ಡಿಪಿಐ ನಾಯಕರು ಸುಂದರ ಮಲೆಕುಡಿಯ ಅವರನ್ನು ಭೇಟಿಯಾಗಿ ದೈರ್ಯ ತುಂಬಿದ್ದರು. ನ್ಯಾಯಕ್ಕಾಗಿ ಹೋರಾಟದ ನೇತೃತ್ವ ವಹಿಸಿದ್ದರು. ಹೋರಾಟದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ನ್ಯಾಯಾಲಯ ಆರೋಪಿಗಳ ವಿರುದ್ದ ಆರೋಪಗಳು ಸಾಬೀತಾಗಿರುವ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶ ನೀಡಿರುವುದು ತಡವಾದರು ಸಂತ್ರಸ್ತರಿಗೆ ಹಾಗೂ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಅಕ್ಬರ್ ಬೆಳ್ತಂಗಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!