September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya
error: Content is protected !!