25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

ಬೆಳ್ತಂಗಡಿ : ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆಯ ಕಾರ್ಯಕ್ರಮ ಫೆ. 18 ರಂದು ಉಪ್ಪಿನಂಗಡಿಯ ಹೆಚ್ ಎಂ ಹಾಲ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಖಾಸಗಿ ಬಸ್ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಸಿದ್ದಿಕ್ ಕೆಂಪಿ ವಹಿಸಿದ್ದರು..

ಖಾಸಗಿ ಬಸ್ ನೌಕರರ ಸಂಘದ ಕಳೆದ ಐದಾರು ವರ್ಷಗಳಿಂದ ನಡೆದು ಬಂದ ದಾರಿಯನ್ನು ಖಾಸಗಿ ಬಸ್ ನೌಕರ ಸಂಘದ ಗೌರವ ಸಲಹೆಗಾರದ ಚಿದಾನಂದ ಸಾಲ್ಯಾನ್ ಇವರು ಪ್ರಾಸ್ತವಿಕ ನುಡಿಗಳೊಂದಿಗೆ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖಾಸಗಿ ಬಸ್ ನೌಕರರ ಸಂಘದ ಕಾನೂನು ಸಲಹೆಗಾರರಾದ ಪ್ರಶಾಂತ್ ಎಂ ಇದೇ ಪ್ರಥಮ ಬಾರಿಗೆ ಖಾಸಗಿ ಬಸ್ ನೌಕರರ ಸಂಘ ನಮ್ಮ ತಾಲೂಕಿನಲ್ಲಿ ಆದದ್ದು ಬಹಳ ಸಂತೋಷಕವಾದ ವಿಷಯ ಎಂದು ತಿಳಿಸಿ ಇನ್ನು ಮುಂದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ನೌಕರರ ಸಂಘವನ್ನು ಸೇರಿಸಿ ಸಾರ್ವಜನಿಕರಿಗೆ ಹಾಗೂ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಮತ್ತು ಕೊಡುಗೆಗಳನ್ನು ನೀಡಿ ಎಂದು ಶುಭ ಹಾರೈಸಿದರು .


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಮಾಜಿಕ ಕಾರ್ಯಕರ್ತರಾದ ಇಬ್ರಾಹಿಂ ದುಬೈಲ ಖಾಸಗಿ ಬಸ್ ನೌಕರರ ಶಿಸ್ತು ನಿಯಮಗಳನ್ನು ತಿಳಿಸಿದರು..
ಈ ಸಂದರ್ಭದಲ್ಲಿ ಖಾಸಗಿ ಬಸ್ ನೌಕರರ ಸಂಘದ ಕಾನೂನು ಸಲಹೆಗಾರದ ಪ್ರಸಾದ್ ಕುಮಾರ್ ಪುತ್ತೂರು, ಖಾಸಗಿ ಬಸ್ ನೌಕರರ ಸಂಘದ ಉಪಾಧ್ಯಕ್ಷ ಪದ್ಮಪ್ರಸಾದ್ ಜೈನ ಬೆಳ್ತಂಗಡಿ, ಖಾಸಗಿ ಬಸ್ ನೌಕರ ಸಂಘದ ಉಪಾಧ್ಯಕ್ಷ ನಾರಾಯಣ ಉಪ್ಪಿನಂಗಡಿ ಉಪಸ್ಥಿತರಿದ್ದರು.

ಈ ವೇಳೆ ಸತತ ಐದಾರು ವರ್ಷಗಳಿಂದ ಸಂಘದ ಅಧ್ಯಕ್ಷರಾಗಿರುವಂತಹ ಸಿದ್ದಿ ಕೆಂಪಿ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.. ಅದೇ ರೀತಿ ಖಾಸಗಿ ಬಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾದ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರದ ದೀಪಕ್ ಜಿ ಬೆಳ್ತಂಗಡಿಯವರನ್ನು ಕೂಡ ಖಾಸಗಿ ಬಸ್ ನೌಕರರ ಸಂಘ ವತಿಯಿಂದ ಸನ್ಮಾನಿಸಲಾಯಿತು…

ಖಾಸಗಿ ಬಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾದ ದೀಪಕ್ ಜಿ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು..

ಖಾಸಗಿ ಬಸ್ ನೌಕರರ ಸಂಘದ ಕೋಶಾಧಿಕಾರಿ ಇಲಿಯಾಸ್ ಸ್ವಾಗತಿಸಿ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

Related posts

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya
error: Content is protected !!