22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

ಲಾಯಿಲ :ಲಾಯಿಲ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಫೆ.21 ರಂದು ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಂ.ಕೆ.ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು‌.

ಹಿಂದುಳಿದ ವರ್ಗಗಳು ಕಲ್ಯಾಣಾಧಿಕಾರಿ ಜೋಸೆಫ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಲಾಯಿಲ ಗ್ರಾಮ ಸಭೆಗೆ 20 ಮಂದಿ ಸದಸ್ಯರು ಪೈಕಿ 10‌ ಮಂದಿ ಸದಸ್ಯರು ಮಾತ್ರ ಇದ್ದಾರೆ. ಗ್ರಾಮ ಸಭೆಗೆ ಸದಸ್ಯರೇ ಬಾರದೆ ಇದ್ದಲ್ಲಿ ಗ್ರಾಮಸ್ಥರು ಬರುತ್ತಾರ. ವಾರ್ಡ್ -1ರ ಸದಸ್ಯ ಮೋಹನ್ ರವರು ಗ್ರಾಮ ಸಭೆಗೆ 4 ವರ್ಷದಿಂದ ಗ್ರಾಮ ಸಭೆ, ವಾರ್ಡ್ ಸಭೆ ಬರಲಿಲ್ಲ‌ ಎಂದು ಗ್ರಾಮಸ್ಥ ಶೇಖರ್ ಲಾಯಿಲ ಆಕ್ಷೇಪ ವ್ಯಕ್ತಪಡಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರಾದ ಆಶಾ ಬೆನಡಿಕ್ಟ ಸಲ್ದಾನ, ಹರೀಶ, ಅರವಿಂದ್ ಕುಮಾರ್, ಪ್ರಸಾದ್ ಶೆಟ್ಟಿ ಏಣಿಂಜೆ, ರಜನಿ, ದಿನೇಶ್ ಶೆಟ್ಟಿ, ಸವಿತಾ ಶೆಟ್ಟಿ, ಮೊಹ್ಮದ್ ಸಲೀಂ, ರೇವತಿ, ಹರೀಶ್ ಕುಲಾಲ್ ಹಾಗೂ ಜಯಂತಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಅಂಕಾಜೆ ಹಾಗೂ ಉದಯ್ ಕುಮಾರ್ ಮತ್ತು ಕ್ರೀಡಾ ಸಾಧಕಿ ಚಂದ್ರಿಕಾ ಅವರನ್ನು ಸನ್ಮಾನಿಸಲಾಯಿತು.

ಪಿಡಿಓ ಶ್ರೀನಿವಾಸ್ ಸ್ವಾಗತಿಸಿ, ಕಾರ್ಯದರ್ಶಿ ತಾರಾನಾಥ್ ವಾರ್ಡ್ ಸಭೆಗಳ ಬೇಡಿಕೆ ವಾಚಿಸಿದರು.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya
error: Content is protected !!