23 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!