24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!