25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya
error: Content is protected !!