22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!