36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

ನೆರಿಯ ಗ್ರಾಮದ ಸುಂದರ ಮಲೆಕುಡಿಯರ ಕೈಗೆ ಕಳೆ ಕೊಚ್ಚುವ ಯಂತ್ರದಿಂದ ಅಮಾನುಷವಾಗಿ ಕಡಿದು ಬೆರಳನ್ನು ತುಂಡರಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ದಶಕದ ಬಳಿಕ ಸಮಾಧಾನಕರ ತೀರ್ಪನ್ನು ನೀಡಿದೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷರುಗಳಾದ ಸಂಜೀವ ಕುಲ್ಲಾಜೆ, ಎಲ್ಯಣ್ಣ ಮಲೆಕುಡಿಯ ಅಂದಿನ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಲಂಗಾರು , ವಸಂತಿ ಕುತ್ಲೂರು, ಉಡುಪಿ ಜಿಲ್ಲಾ ಅಧ್ಯಕ್ಷ ಶ್ರೀಧರ್ ಗೌಡ ಈದು ಮೊದಲಾದವರ ನೇತೃತ್ವದಲ್ಲಿ ಕೇಮಾರು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೃಹತ್ ಹೋರಾಟವನ್ನು ಮಾಡಲಾಗಿತ್ತು.

ಹೋರಾಟದಲ್ಲಿ ಭಾಗಿಯಾದ ಎಲ್ಲಾ ಸಮುದಾಯ ಬಾಂಧವರಿಗೆ , ತನಿಖಾಧಿಕಾರಿಗಳು ಮತ್ತು ಅಭಿಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ. ದೌರ್ಜನ್ಯಕ್ಕೊಳಗಾದ ಸುಂದರ ಮಲೆಕುಡಿಯರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ನೀಡುವಂತೆ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
error: Content is protected !!