23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

ನೆರಿಯ ಗ್ರಾಮದ ಸುಂದರ ಮಲೆಕುಡಿಯರ ಕೈಗೆ ಕಳೆ ಕೊಚ್ಚುವ ಯಂತ್ರದಿಂದ ಅಮಾನುಷವಾಗಿ ಕಡಿದು ಬೆರಳನ್ನು ತುಂಡರಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ದಶಕದ ಬಳಿಕ ಸಮಾಧಾನಕರ ತೀರ್ಪನ್ನು ನೀಡಿದೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷರುಗಳಾದ ಸಂಜೀವ ಕುಲ್ಲಾಜೆ, ಎಲ್ಯಣ್ಣ ಮಲೆಕುಡಿಯ ಅಂದಿನ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಲಂಗಾರು , ವಸಂತಿ ಕುತ್ಲೂರು, ಉಡುಪಿ ಜಿಲ್ಲಾ ಅಧ್ಯಕ್ಷ ಶ್ರೀಧರ್ ಗೌಡ ಈದು ಮೊದಲಾದವರ ನೇತೃತ್ವದಲ್ಲಿ ಕೇಮಾರು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೃಹತ್ ಹೋರಾಟವನ್ನು ಮಾಡಲಾಗಿತ್ತು.

ಹೋರಾಟದಲ್ಲಿ ಭಾಗಿಯಾದ ಎಲ್ಲಾ ಸಮುದಾಯ ಬಾಂಧವರಿಗೆ , ತನಿಖಾಧಿಕಾರಿಗಳು ಮತ್ತು ಅಭಿಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ. ದೌರ್ಜನ್ಯಕ್ಕೊಳಗಾದ ಸುಂದರ ಮಲೆಕುಡಿಯರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ನೀಡುವಂತೆ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya
error: Content is protected !!