September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

ಬೆಳ್ತಂಗಡಿ: 2015ರಲ್ಲಿ ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಹಾಗೂ ಕುಟುಂಬದ ಮೇಲೆ ಹಲ್ಲೆ ಮತ್ತು ಕೈ ಬೆರಳು ಕತ್ತರಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆ ಆದೇಶ ಪ್ರಕಟವಾಗಿರುವುದು ಸುಂದರ ಮಲೆಕುಡಿಯ ಅವರ ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದ ಗಂಭೀರತೆಯನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯು 2015ರಲ್ಲಿ ಉಜಿರೆಯಿಂದ ಬೆಳ್ತಂಗಡಿವರೆಗೆ ಬೃಹತ್ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ನಡೆಸಿತ್ತು.


ಎಸ್‌ಡಿಪಿಐ ನಾಯಕರು ಸುಂದರ ಮಲೆಕುಡಿಯ ಅವರನ್ನು ಭೇಟಿಯಾಗಿ ದೈರ್ಯ ತುಂಬಿದ್ದರು. ನ್ಯಾಯಕ್ಕಾಗಿ ಹೋರಾಟದ ನೇತೃತ್ವ ವಹಿಸಿದ್ದರು. ಹೋರಾಟದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ನ್ಯಾಯಾಲಯ ಆರೋಪಿಗಳ ವಿರುದ್ದ ಆರೋಪಗಳು ಸಾಬೀತಾಗಿರುವ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶ ನೀಡಿರುವುದು ತಡವಾದರು ಸಂತ್ರಸ್ತರಿಗೆ ಹಾಗೂ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಅಕ್ಬರ್ ಬೆಳ್ತಂಗಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!