July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಕುತ್ಲೂರು : ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ) ಕುತ್ಲೂರು ಇದರ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ ಪುರುಷರ ವಿಭಾಗದ ಪ್ರೋ ಮಾದರಿಯ ಗ್ರಾಮ ಸೀಮಿತ ಮುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಶಿವಶಕ್ತಿ ಟ್ರೋಫಿ 2025 ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಫೆ. 23 ರಂದು ಬೆಳಗ್ಗೆ ಗಂಟೆ 9-00ಕ್ಕೆ ಕುತ್ಲೂರು ಬಂತ್ರುಗುಡ್ಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಮಾರಂಭದ ಉದ್ಘಾಟನೆಯನ್ನು ಕೊಕ್ರಾಡಿ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅರ್ಚಕರು ರಮೇಶ್ ಭಟ್ , ಮೆಡಿಕಲ್ ಕ್ಯಾಂಪ್‌ ಉದ್ಘಾಟನೆಯನ್ನು ಡಾ। ಪ್ರಸಾದ್ ಬಿ. ಶೆಟ್ಟಿ ವಿಜಯ ಪಾಲಿಕ್ಲಿನಿಕ್ ಹೊಸ್ಮಾರು, ಕ್ರೀಡಾಂಗಣ ಉದ್ಘಾಟನೆಯನ್ನು ಪ್ರವೀಣ್ ಶಿಲ್ಪಲೋಕ ಕುತ್ಲೂರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾಕರ ಬುಣ್ಣು ಕಾಡಬೆಟ್ಟು ಕುತ್ಲೂರು ವಹಿಸಲಿದ್ದಾರೆ.

ಶಿಬಿರದ ವಿಶೇಷತೆಗಳು : ವೈದ್ಯಕೀಯ ವಿಭಾಗ , ಚರ್ಮದ ವಿಭಾಗ, ಸ್ತ್ರೀರೋಗ ವಿಭಾಗ, ಮಕ್ಕಳ ವಿಭಾಗ, ಕಿವಿ ಮೂಗು ಗಂಟಲು ವಿಭಾಗ, ದಂತ ಚಿಕಿತ್ಸಾ ವಿಭಾಗ, ಹೃದಯ ವಿಭಾಗ ,ಕಣ್ಣಿನ ವಿಭಾಗ , ಶಸ್ತ್ರಚಿಕಿತ್ಸಾ ವಿಭಾಗ , ಎಲುಬು ಮತ್ತು ಕೀಲು ವಿಭಾಗ , ಬಿ.ಪಿ. ಶುಗರ್ ಮತ್ತು ರಕ್ತದ ಗುಂಪು ತಪಾಸಣೆ ನಡೆಯಲಿದೆ.

ಅದೇ ದಿನ ರಾತ್ರಿ ಗಂಟೆ 9.30ಕ್ಕೆ ಕಾಪು ರಂಗತರಂಗ ಕಲಾವಿದರ ಈ ವರ್ಷದ ನೂತನ ಕುಟ್ಯಾಣ್ಣನ ಕುಟುಂಬ ತುಳು ಸಾಂಸಾರಿಕ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
error: Content is protected !!