22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

ಬೆಳ್ತಂಗಡಿ: ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.


ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು, ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.


ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್, ಸಮಿತಿ ಅಧ್ಯಕ್ಷ ವಾಸುದೇವ ಗೋಖಲೆ, ಕಾರ್ಯದರ್ಶಿ ಬಾಬು ಪೂಜಾರಿ, ಅರೆಕಲ್ಲು ರಾಮಚಂದ್ರ ಭಟ್, ಪುಷ್ಪರಾಜ ರೈ, ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.


ಪಾದಯಾತ್ರೆಯಲ್ಲಿ ಸಾಗಿ ಬರುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ಚಾರ್ಮಾಡಿಯಿಂದಲೇ ಅಲ್ಲಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ.

Related posts

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya
error: Content is protected !!