September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

ಬೆಳ್ತಂಗಡಿ: 2015ರಲ್ಲಿ ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಹಾಗೂ ಕುಟುಂಬದ ಮೇಲೆ ಹಲ್ಲೆ ಮತ್ತು ಕೈ ಬೆರಳು ಕತ್ತರಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆ ಆದೇಶ ಪ್ರಕಟವಾಗಿರುವುದು ಸುಂದರ ಮಲೆಕುಡಿಯ ಅವರ ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದ ಗಂಭೀರತೆಯನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯು 2015ರಲ್ಲಿ ಉಜಿರೆಯಿಂದ ಬೆಳ್ತಂಗಡಿವರೆಗೆ ಬೃಹತ್ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ನಡೆಸಿತ್ತು.


ಎಸ್‌ಡಿಪಿಐ ನಾಯಕರು ಸುಂದರ ಮಲೆಕುಡಿಯ ಅವರನ್ನು ಭೇಟಿಯಾಗಿ ದೈರ್ಯ ತುಂಬಿದ್ದರು. ನ್ಯಾಯಕ್ಕಾಗಿ ಹೋರಾಟದ ನೇತೃತ್ವ ವಹಿಸಿದ್ದರು. ಹೋರಾಟದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ನ್ಯಾಯಾಲಯ ಆರೋಪಿಗಳ ವಿರುದ್ದ ಆರೋಪಗಳು ಸಾಬೀತಾಗಿರುವ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶ ನೀಡಿರುವುದು ತಡವಾದರು ಸಂತ್ರಸ್ತರಿಗೆ ಹಾಗೂ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಅಕ್ಬರ್ ಬೆಳ್ತಂಗಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
error: Content is protected !!