23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

ನೆರಿಯ ಗ್ರಾಮದ ಸುಂದರ ಮಲೆಕುಡಿಯರ ಕೈಗೆ ಕಳೆ ಕೊಚ್ಚುವ ಯಂತ್ರದಿಂದ ಅಮಾನುಷವಾಗಿ ಕಡಿದು ಬೆರಳನ್ನು ತುಂಡರಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ದಶಕದ ಬಳಿಕ ಸಮಾಧಾನಕರ ತೀರ್ಪನ್ನು ನೀಡಿದೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷರುಗಳಾದ ಸಂಜೀವ ಕುಲ್ಲಾಜೆ, ಎಲ್ಯಣ್ಣ ಮಲೆಕುಡಿಯ ಅಂದಿನ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಲಂಗಾರು , ವಸಂತಿ ಕುತ್ಲೂರು, ಉಡುಪಿ ಜಿಲ್ಲಾ ಅಧ್ಯಕ್ಷ ಶ್ರೀಧರ್ ಗೌಡ ಈದು ಮೊದಲಾದವರ ನೇತೃತ್ವದಲ್ಲಿ ಕೇಮಾರು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೃಹತ್ ಹೋರಾಟವನ್ನು ಮಾಡಲಾಗಿತ್ತು.

ಹೋರಾಟದಲ್ಲಿ ಭಾಗಿಯಾದ ಎಲ್ಲಾ ಸಮುದಾಯ ಬಾಂಧವರಿಗೆ , ತನಿಖಾಧಿಕಾರಿಗಳು ಮತ್ತು ಅಭಿಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ. ದೌರ್ಜನ್ಯಕ್ಕೊಳಗಾದ ಸುಂದರ ಮಲೆಕುಡಿಯರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ನೀಡುವಂತೆ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya
error: Content is protected !!