September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಲ್ಮಂಜ : ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಮಂಜ ಶಾಲಾ ಶತಮಾನೋತ್ಸವ ಸಮಿತಿ ಅಂಗವಾಗಿ ಬೆನಕ ಹೆಲ್ತ್ ಸೆಂಟರ್, ಉಜಿರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್‌ ಉಜಿರೆ ಇವರ ಪ್ರಾಯೋಜಕತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಫೆ.23ರಂದು ಬೆಳಿಗ್ಗೆ ಗಂಟೆ 9-30ರಿಂದ 1-30ರವರೆಗೆ ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿರುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಬೆನಕ ಹೆಲ್ತ್ ಸೆಂಟರ್ ಆಡಳಿತ ನಿರ್ದೇಶಕರು ಡಾ| ಗೋಪಾಲಕೃಷ್ಣ ಕೆ. ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನುಕಲ್ಮಂಜ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ ವಹಿಸಲಿದ್ದಾರೆ.

ಶಿಬಿರದಲ್ಲಿ ಪಾಲ್ಗೊಳ್ಳುವ ತಜ್ಞ ವೈದ್ಯರು: ಶಸ್ತ್ರಚಿಕಿತ್ಸಾ ತಜ್ಞರು – ಡಾ| ವಿಜೇತ್ ರೈ, ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು- ಡಾ| ಆದಿತ್ಯ ರಾವ್, (ಫಿಸಿಶಿಯನ್), ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು -ಡಾ| ಅಂಕಿತಾ ಜಿ ಭಟ್, ಎಲುಬು ಕೀಲು ತಜ್ಞರು- ಡಾ| ರೋಹಿತ್ ಜಿ. ಭಟ್, ಮಕ್ಕಳ ತಜ್ಞರು ಡಾ| ಶಂತನು ಪ್ರಭು,

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ, ಔಷಧ ವಿತರಣೆ.

Related posts

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!