23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

ಗೇರಕಟ್ಟೆ : ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ ನಡೆಯಿತು. ಕಳಿಯ ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಮಜಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಸಭೆಯ ಅಧ್ಯಕ್ಷ ಸ್ಥಾನವನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮೋಹನ ಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಪುಷ್ಪ ಮೆಟ್ರಿಕ್ ಮೇಳದ ಪರಿಚಯದ ಭಿತ್ತಿ ಪತ್ರವನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ ಕೃಷ್ಣರವರು ಉಪಸ್ಥಿತರಿದ್ದು ಮೆಟ್ರಿಕ್ ಮೇಳದ ಮಳಿಗೆಗಳಿಗೆ ಚಾಲನೆ ನೀಡಿದರು.


ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಸ್ರಣ್ಣರವರು ಶಾಲಾ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ನೂರು ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯ ಪರವಾಗಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ರೀತಾ ಚಂದ್ರಶೇಖರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಪೆಂರ್ಬುಡ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾದ ಚೇತನಾಕ್ಷಿ ದೈಹಿಕ ಪರಿವೀಕ್ಷಣಾಧಿಕಾರಿಯಾದ ಸುಜಯ್ ರವರು ಮೆಟ್ರಿಕ್ ಮೇಳಕ್ಕೆ ಭೇಟಿ ನೀಡಿ ಪ್ರಶಂಸೆಯನ್ನು ವ್ಯಕ್ತಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಡಿಮೆಲ್ಲೊರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು ಸಹ ಶಿಕ್ಷಕಿ ಕವಿತಾ ರವರು ಸ್ವಾಗತಿಸಿದರು. ಸಹ ಶಿಕ್ಷಕಿ ಇಂದುಶ್ರೀ ರೈ ಹೆಚ್.ಅವರು ವಂದಿಸಿದರು. ಸಹಶಿಕ್ಷಕಿ ಸಿಸಿಲಿಯಾ ಫ್ಲಾವಿಯಾ ಡಿಕೋಸ್ತ ನಿರೂಪಣೆ ಮಾಡಿದರು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಶಾಲಾ ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಶಾಲಾ ವಿಧ್ಯಾರ್ಥಿಗಳು 20 ಹೆಚ್ಚಿನ ಮಳಿಗೆಗಳ ಮೂಲಕ ಹಲವಾರು ಬಗೆಯ ತರಕಾರಿ, ಬೇಕರಿ ಮತ್ತು ಹಣ್ಣು ಹಂಪಲುಗಳನ್ನು ವ್ಯಾಪಾರ ವಹಿವಾಟು ನಡೆಸಿದರು.

Related posts

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya
error: Content is protected !!