25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!