26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya
error: Content is protected !!