July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಶಿಬಿರದ ಉದ್ಘಾಟನೆಯನ್ನು ಅವಿನಾಶ್ ಎಚ್ ಗೌಡ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉಪ್ಪಿನಂಗಡಿ ಇವರು ಜ್ಯೋತಿಯನ್ನು ಬೆಳಗುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದಯಾನಂದ್ ರವರು ಅಧ್ಯಕ್ಷೀಯ ನುಡಿಗಳನ್ನು ಮಾತನಾಡುವ ಮೂಲಕ ಶಿಬಿರಾರ್ಥಿಗಳಿಗೆ ಸ್ವಾಗತ ಹಾಗೂ ಶುಭವನ್ನು ಕೋರಿದರು.

ಕಾರ್ಯಕ್ರಮದಲ್ಲಿ ದಯಾನಂದ್, ಅವಿನಾಶ್ ಎಚ್ ಗೌಡ, ಎಂ.ಜಿ.ಅಬೂಬಕರ್ ಪುತ್ತು, ಶ್ರೀಮತಿ ಅನುರಾಧ ಪಿ ಆರ್, ಸುಬ್ರಮಣ್ಯ ರಾವ್, ಇನಾಸ್ ರೋಡ್ರಿಗಾಸ್, ಅಬ್ಬಾಸ್ ಮಡಿಕೇರಿ ಬೆಟ್ಟು,ಅಬ್ದುಲ್ ಹಕೀಂ ತನಲ್, ಅನ್ವರ್, ನೌಮಾನ್, ಶ್ರೀಮತಿ ಜುಬೈದ ವಕೀಲರು, ಶ್ರೀಮತಿ ಸಫೀನ, ಮಹಮ್ಮದ್ ಕೈಸ್, ಕುಮಾರಿ ಫಿಲ್ಮಿ ಮೆಹಬೂಬ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾರ್ಥನೆ ಗೀತೆಯೊಂದಿಗೆ ಎನ್ ಎಸ್ ಎಸ್ ಶಿಬಿರದ ಸಂಯೋಜಕರಾದ ಅಬ್ದುಲ್ ರಶೀದ್ ಸ್ವಾಗತಿಸಿದರು. ಶಾಕೀರ್ ವಂದಿಸಿದರು, ಶಿಕ್ಷಕರಾದ ಸುನಿಲ್ ಕುಮಾರ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು, ಅಭಿಷೇಕ್ ಆರ್ .ಎನ್. ಸಹಕರಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!