September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಶಿಬಿರದ ಉದ್ಘಾಟನೆಯನ್ನು ಅವಿನಾಶ್ ಎಚ್ ಗೌಡ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉಪ್ಪಿನಂಗಡಿ ಇವರು ಜ್ಯೋತಿಯನ್ನು ಬೆಳಗುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದಯಾನಂದ್ ರವರು ಅಧ್ಯಕ್ಷೀಯ ನುಡಿಗಳನ್ನು ಮಾತನಾಡುವ ಮೂಲಕ ಶಿಬಿರಾರ್ಥಿಗಳಿಗೆ ಸ್ವಾಗತ ಹಾಗೂ ಶುಭವನ್ನು ಕೋರಿದರು.

ಕಾರ್ಯಕ್ರಮದಲ್ಲಿ ದಯಾನಂದ್, ಅವಿನಾಶ್ ಎಚ್ ಗೌಡ, ಎಂ.ಜಿ.ಅಬೂಬಕರ್ ಪುತ್ತು, ಶ್ರೀಮತಿ ಅನುರಾಧ ಪಿ ಆರ್, ಸುಬ್ರಮಣ್ಯ ರಾವ್, ಇನಾಸ್ ರೋಡ್ರಿಗಾಸ್, ಅಬ್ಬಾಸ್ ಮಡಿಕೇರಿ ಬೆಟ್ಟು,ಅಬ್ದುಲ್ ಹಕೀಂ ತನಲ್, ಅನ್ವರ್, ನೌಮಾನ್, ಶ್ರೀಮತಿ ಜುಬೈದ ವಕೀಲರು, ಶ್ರೀಮತಿ ಸಫೀನ, ಮಹಮ್ಮದ್ ಕೈಸ್, ಕುಮಾರಿ ಫಿಲ್ಮಿ ಮೆಹಬೂಬ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾರ್ಥನೆ ಗೀತೆಯೊಂದಿಗೆ ಎನ್ ಎಸ್ ಎಸ್ ಶಿಬಿರದ ಸಂಯೋಜಕರಾದ ಅಬ್ದುಲ್ ರಶೀದ್ ಸ್ವಾಗತಿಸಿದರು. ಶಾಕೀರ್ ವಂದಿಸಿದರು, ಶಿಕ್ಷಕರಾದ ಸುನಿಲ್ ಕುಮಾರ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು, ಅಭಿಷೇಕ್ ಆರ್ .ಎನ್. ಸಹಕರಿಸಿದರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya
error: Content is protected !!