34.6 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಇಲ್ಲಿ ತೆಗೆಯುವ ಒಂದೊಂದು ಅಂಕವೂ ಭವಿಷ್ಯಕ್ಕೆ ಬುನಾದಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಜೀವ ಶಾಸ್ತ್ರ, ಅಥವಾ ಇತರ ಆಯ್ಕೆಯ ವಿಜ್ಞಾನ ವಿಷಯಗಳಲ್ಲಿ ತಲಾ 30 ರಂತೆ 3 ವಿಷಯಗಳಿಗೆ ಒಟ್ಟು 90 ಅಂಕಗಳಿವೆ.

ವಿದ್ಯಾರ್ಥಿಯ ಅತ್ಯುತ್ತಮ ಫಲಿತಾಂಶಕ್ಕೆ ಪ್ರಾಯೋಗಿಕ ಪರೀಕ್ಷೆಯ ಅಂಕಗಳು ತೀರಾ ಅವಶ್ಯ. ಜೊತೆಗೆ ಸಿ ಇ ಟಿ ಪರೀಕ್ಷೆಗೆ ಪಿಯು ಅಂಕಗಳನ್ನು ಕೂಡಾ ಪರಿಗಣನೆಗೆ ತೆಗೆದುಕೊಳ್ಳುವುದರಿಂದ , ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ತೀರಾ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲು ಇಲಾಖೆಯನ್ನು ಕೋರಲು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅವರನ್ನು ಕೆಲವು ಉಪನ್ಯಾಸಕರು ಸಂಪರ್ಕಿಸಿ, ವಿನಂತಿಸಿದ್ದರು. ರಕ್ಷಿತ್ ಶಿವರಾಂ ಅವರು ಈ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕಾರಿಗಳ ಗಮನ ಸೆಳೆದರು.


ಇದೀಗ ಮಂಡಳಿಯು ಈ ತಿಂಗಳ 24, 25 ಹಾಗೂ 27 ರಂದು ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರಿಗೆ ಆದೇಶ ಹೊರಡಿಸಿದೆ. ಆ ಮೂಲಕ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆ ತೆಗೆದು ಕೊಳ್ಳಲು ಅಸಾಧ್ಯವಾದ ವಿದ್ಯಾರ್ಥಿಗಳಿಗೆ ಮರು ಅವಕಾಶ ಕಲ್ಪಿಸಿದೆ. ತಮ್ಮ ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವರಾಂ ಅವರಿಗೆ ಸಮಸ್ತ ವಿದ್ಯಾರ್ಥಿಗಳ ಪರವಾಗಿ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya
error: Content is protected !!