July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಇಲ್ಲಿ ತೆಗೆಯುವ ಒಂದೊಂದು ಅಂಕವೂ ಭವಿಷ್ಯಕ್ಕೆ ಬುನಾದಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಜೀವ ಶಾಸ್ತ್ರ, ಅಥವಾ ಇತರ ಆಯ್ಕೆಯ ವಿಜ್ಞಾನ ವಿಷಯಗಳಲ್ಲಿ ತಲಾ 30 ರಂತೆ 3 ವಿಷಯಗಳಿಗೆ ಒಟ್ಟು 90 ಅಂಕಗಳಿವೆ.

ವಿದ್ಯಾರ್ಥಿಯ ಅತ್ಯುತ್ತಮ ಫಲಿತಾಂಶಕ್ಕೆ ಪ್ರಾಯೋಗಿಕ ಪರೀಕ್ಷೆಯ ಅಂಕಗಳು ತೀರಾ ಅವಶ್ಯ. ಜೊತೆಗೆ ಸಿ ಇ ಟಿ ಪರೀಕ್ಷೆಗೆ ಪಿಯು ಅಂಕಗಳನ್ನು ಕೂಡಾ ಪರಿಗಣನೆಗೆ ತೆಗೆದುಕೊಳ್ಳುವುದರಿಂದ , ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ತೀರಾ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲು ಇಲಾಖೆಯನ್ನು ಕೋರಲು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅವರನ್ನು ಕೆಲವು ಉಪನ್ಯಾಸಕರು ಸಂಪರ್ಕಿಸಿ, ವಿನಂತಿಸಿದ್ದರು. ರಕ್ಷಿತ್ ಶಿವರಾಂ ಅವರು ಈ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕಾರಿಗಳ ಗಮನ ಸೆಳೆದರು.


ಇದೀಗ ಮಂಡಳಿಯು ಈ ತಿಂಗಳ 24, 25 ಹಾಗೂ 27 ರಂದು ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರಿಗೆ ಆದೇಶ ಹೊರಡಿಸಿದೆ. ಆ ಮೂಲಕ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆ ತೆಗೆದು ಕೊಳ್ಳಲು ಅಸಾಧ್ಯವಾದ ವಿದ್ಯಾರ್ಥಿಗಳಿಗೆ ಮರು ಅವಕಾಶ ಕಲ್ಪಿಸಿದೆ. ತಮ್ಮ ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವರಾಂ ಅವರಿಗೆ ಸಮಸ್ತ ವಿದ್ಯಾರ್ಥಿಗಳ ಪರವಾಗಿ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya
error: Content is protected !!